Tuesday, 31 January 2017

31-01-2017 ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:- ದಿನಾಂಕ:31-01-2017ರ ಮಂಗಳವಾರದಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಡಿ.ಭಾರತಿ ಕೆ.ಎ.ಎಸ್.(ಹಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಶ್ರೀ ಮ.ಮ. ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಪ್ರಭಾರ ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ, ಕಛೇರಿಯ ಅಧೀಕ್ಷಕರಾದ ಶ್ರೀ ಬಿ.ಮಾದರಾಜು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟದ ಆರಕ್ಷಕ ನಿರೀಕ್ಷಕರು & ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು(ಒಂದು ತಿಂಗಳಿಗೆ) ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ. 1,03,18,001-00 ( ಒಂದು ಕೋಟಿ ಮೂರು ಲಕ್ಷದ ಹದಿನೆಂಟು ಸಾವಿರದ ಒಂದು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 025 (ಇಪ್ಪತ್ತೈದು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.180( ಒಂದು ಸಾವಿರದ ಒಂದುನೂರ ಎಂಭತ್ತು ಗ್ರಾಂ) ದೊರೆತಿರುತ್ತದೆ.

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು