Friday, 3 February 2017
ಚಾಮರಾಜನಗರ ಜಿಲ್ಲಾ ಪೊಲೀಸ್ ಪ್ರಕಟಣೆ
ಚಾಮರಾಜನಗರ ಜಿಲ್ಲಾ ಪೊಲೀಸ್ ಪ್ರಕಟಣೆ
ದಿನಾಂಕ : 13-01-2017 ರಂದು ಚಾಮರಾಜನಗರ ಜಿಲ್ಲೆಯ, ಕೊಳ್ಳೇಗಾಲ ಪಟ್ಟಣದ ಕಾವೇರಿ ರಸ್ತೆಯಲ್ಲಿರುವ ಡಾ|| ಬಿ.ಆರ್. ಅಂಬೇಡ್ಕರ್ ಭಾವ ಚಿತ್ರವಿರುವ ಕಮಾನಿಗೆ ಕಿಡಿಗೇಡಿಗಳು ಚಪ್ಪಲಿಗಳನ್ನು ಕಟ್ಟಿದ್ದು, ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣಾ ಮೊಕದ್ದಮೆ ಸಂಖ್ಯೆ: 09/2017, ಕಲಂ 295 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ, ತನಿಖೆ ನಡೆಸಿ, ಪೊಲೀಸ್ ಇಲಾಖೆಯು ಈಗಾಗಲೇ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುವ ವಿಷಯವು ತಮಗೆಲ್ಲರಿಗೂ ತಿಳಿದಿರುತ್ತದೆ.
ಮಾನ್ಯ ಬಾಬಾಸಾಹೇಬ್ ಡಾ||ಬಿ.ಆರ್ ಅಂಬೇಡ್ಕರ್ ರವರಂತಹ ಮಹಾನ್ ಚೇತನವನ್ನು ಪದೇ ಪದೇ ಸಮಾಜಘಾತುಕ ಶಕ್ತಿಗಳು ದುರುಪಯೋಗ ಪಡಿಸಿಕೊಂಡು, ತಮ್ಮ ಸ್ವಾರ್ಥ ಈಡೇರಿಕೆಗೆ ಬಳಸಿಕೊಳ್ಳುತ್ತಿರುವುದು ಅಪಾರವಾದ ನೋವುಂಟು ಮಾಡಿರುತ್ತದೆ. ಮೇಲ್ಕಂಡ ಅಹಿತಕರ ಘಟನೆಗೆ ಮೂಲ ಕಾರಣ, ಸಮಾಜದ ಹಾಗೂ ಬೇರೆ ಬೇರೆ ಕೋಮುಗಳ ನಡುವೆ ಶಾಂತಿಯನ್ನು ಕದಡಿ, ತಮ್ಮ ಸ್ವಾರ್ಥ ಸಾಧನೆ ಮಾಡಿಕೊಳ್ಳುವುದಾಗಿರುತ್ತದೆ. ಒಂದು ವೇಳೆ ಈ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿದ್ದಲ್ಲಿ, ಸಮಾಜಘಾತುಕ ಶಕ್ತಿಗಳು ತಮ್ಮ ಸ್ವಾರ್ಥವನ್ನು ಈಡೇರಿಸಿಕೊಳ್ಳುವಲ್ಲಿ ಸಫಲವಾಗುತ್ತಿದ್ದವು.
ಆದರೆ ಈ ಸಂಬಂಧ ಜಿಲ್ಲೆಯ ಮಾದ್ಯಮಗಳು, ವಿವಿಧ ರಾಜಕೀಯ ಪಕ್ಷಗಳು, ದಲಿತಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಯಾವುದೇ ಪ್ರಚೋದಿತವಾದ ಗಾಳಿಸುದ್ದಿಗೆ ಕಿವಿಗೊಡದೆ, ಭಾವೋದ್ವೇಗಗೊಳ್ಳದೆ, ಶಾಂತರೀತಿಯಿಂದ ವರ್ತಿಸಿ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನೀಡಿದ ಎಲ್ಲಾ ಮನವಿ ಹಾಗೂ ಆದೇಶಗಳಿಗೂ ಸಹಕರಿಸಿ, ನಿಜವಾದ ಅಪರಾಧಿಗಳ ಪತ್ತೆಗೆ ಅನುವು ಮಾಡಿಕೊಟ್ಟ ನಡೆ ಇಡೀ ರಾಷ್ಟ್ರಕ್ಕೆ ಅನುಕರಣೀಯ ಮತ್ತು ಆದರ್ಶಪ್ರಾಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಎಲ್ಲರಿಗೂ ಆಬಾರಿಯಾಗಿರುತ್ತವೆ. ಇದೇ ರೀತಿಯಲ್ಲಿ ಮುಂದೆಯೂ ಸಹ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಸಾರ್ವಜನಿಕ ಶಾಂತಿಯನ್ನು ಕಾಪಾಡಲು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಮ್ರವಾಗಿ ಪ್ರಾರ್ಥಿಸುತ್ತೇನೆ.
(ಕುಲ್ದೀಪ್ ಕುಮಾರ್ ಆರ್ ಜೈನ್, ಐ.ಪಿ.ಎಸ್)
ಪೊಲೀಸ್ ಅಧೀಕ್ಷಕರು,
ಚಾಮರಾಜನಗರ ಜಿಲ್ಲೆ.
Subscribe to:
Post Comments (Atom)
ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?
ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ ಚಾಮರಾಜನಗ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment