Saturday, 18 February 2017

question paper leak

<ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಹಗರಣದ ಪ್ರಮುಖ ಆರೋಪಿಗಳಾದ ಕಿರಣ್ ಮತ್ತು ಶಿವಕುಮಾರಸ್ವಾಮಿಯನ್ನು ಬಂಧಿಸಲಾಗಿದೆ. ಗಂಗಬೈರಯ್ಯ ಸೇರಿ ಇದುವರೆಗೂ ಈ ಪ್ರಕರಣದಲ್ಲಿ 17 ಆರೋಪಿಗಳನ್ನು ಬಂಧಿಸಲಾಗಿದೆ. 2016ರ ಮಾರ್ಚ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಮಾರ್ಚ್ 21 ರಂದು ನಡೆದ ರಸಾಯನಶಾಸ್ತ್ರ ಪರೀಕ್ಷೆಯನ್ನು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ರದ್ದು ಮಾಡಲಾಗಿತ್ತು. ಮಾರ್ಚ್ 31 ರಂದು ಮರು ಪರೀಕ್ಷೆ ನಡೆಯಬೇಕಿತ್ತು. ಆದರೆ, ಅಂದು ಬೆಳಗ್ಗೆ ಪತ್ರಿಕೆ ಪುನಃ ಸೋರಿಕೆಯಾಗಿತ್ತು. ಈ ಹಗರಣದ ತನಿಖೆಯನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಹಾನಗಲ್ ಉಪ ಖಜಾನೆಯಿಂದ ಸೋರಿಕೆಯಾಗಿತ್ತು' ಆರೋಪಿಗಳಾದ ರುದ್ರಪ್ಪ, ರಂಗನಾಥ್, ಓಬಳರಾಜು ಮತ್ತು ಮಂಜುನಾಥ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಆರೋಪಿಗಳಾದ ಟ್ಯುಟೋರಿಯಲ್ ಮುಖ್ಯಸ್ಥ ಮುರಳೀಧರ್ ಮತ್ತು ಸತೀಶ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು