Monday, 31 July 2017

ಮಾಜಿ ಮುಖ್ಯ ಮಂತ್ರಿ ಎನ್.ಧರಂಸಿಂಗ್ ಅವರ ನಿಧನಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸಭೆ ನಡೆಸಿ ತೀವ್ರ ಸಂತಾಪ 27-07-20178

ಚಾಮರಾಜನಗರ ಜುಲೈ 27  ಮಾಜಿ ಮುಖ್ಯ ಮಂತ್ರಿ ಎನ್.ಧರಂಸಿಂಗ್ ಅವರ ನಿಧನಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಸಭೆ ನಡೆಸಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಹೊರ ರಾಜ್ಯದ ಪ್ರವಾಸದಲ್ಲಿರುವ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಹಾಗೂ ಸದಸ್ಯರು ಇಂದು ಜೈಪುರ ಪ್ರವಾಸದಲ್ಲಿದ್ದರು. ಮಾಜಿ ಮುಖ್ಯ ಮಂತ್ರಿ ಎನ್. ಧರಂಸಿಂಗ್ ಅವರ ನಿಧನದ ಸುದ್ದಿ ಕೇಳುತ್ತಿದ್ದಂತೆಯೇ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಹಾಗೂ ಸದಸ್ಯರು ಹೋಟೆಲ್ ಒಂದರ ಆವರಣದಲ್ಲಿ ಸಭೆ ಸೇರಿ ಅಗಲಿದ ನಾಯಕನಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಅವರು ಮಾಜಿ ಮುಖ್ಯ ಮಂತ್ರಿ ಎನ್.ಧರಂಸಿಂಗ್ ರವರು ಎಲ್ಲರ ಪ್ರೀತಿ ವಿಶ್ವಾಸ ಗಳಿಸುವ ಮೂಲಕ ಅಜಾತ ಶತ್ರುವಾಗಿದ್ದರು ಅವರ ನಿಧನದಿಂದ ಪಕ್ಷಕ್ಕೆ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಎಂದು ಕಂಬನಿ ಮಿಡಿದಿದ್ದಾರೆ.
ಧರಂ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲ ಚಾಮರಾಜನಗರ ಜಿಲ್ಲೆಯ ಮೂಲ ಸೌಕರ್ಯಕ್ಕೂ ಸಾಕಷ್ಟು ಕೊಡುಗೆ ನೀಡಿದ್ದರು. ಅಭಿವೃದ್ಧಿ ವಿಷಯದಲ್ಲಿ ಯಾವುದೇ ತಾರತಮ್ಯ ಮಾಡದೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.  ಧರಂ ಸಿಂಗ್ ರವರ ನಿಧನದಿಂದ ಉಂಟಾಗಿರುವ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬಂಕ್ಕೆ ಭಗವಂತ ನೀಡಲಿ ಎಂದು ಕೋರುವೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ತಿಳಿಸಿದ್ದಾರೆ.
ಜಿ.ಪಂ ಸ್ಥಾಯಿಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವ ಮೂರ್ತಿ, ಬಿ.ಕೆ.ಬೊಮ್ಮಯ್ಯ, ಕೆರೆಹಳ್ಳಿ ನವೀನ್, ಸದಸ್ಯರಾದ ಇಶ್ರತ್ ಬಾನು, ಡಿ.ಲೇಖ, ಶಿವಮ್ಮ, ಮಂಜುಳ, ಉಮಾವತಿ, ಚೆನ್ನಪ್ಪ, ರತ್ನಮ್ಮ, ಶಶಿಕಲಾ, ಸಿ.ಎನ್. ಬಾಲರಾಜು, ಚಂದ್ರಕಲಾ, ನಾಗರಾಜು(ಕಮಲ್) ಇದ್ದರು.

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು