Monday, 30 April 2018

(30-04-2018)ವಿಧಾನಸಭಾ ಚುನಾವಣೆ- 2018 ಏ.30ರಂದು ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ

ವಿಧಾನಸಭಾ ಚುನಾವಣೆ- 2018
ಏ.30ರಂದು ಚಾಮರಾಜನಗರ ಹಾಗೂ ಕೊಳ್ಳೇಗಾಲದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಚುನಾವಣಾ ತರಬೇತಿ ಕಾರ್ಯಕ್ರಮ

ಚಾಮರಾಜನಗರ, ಏ. 29 - ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚಾಮರಾಜನಗರ ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳಿಗೆ ಏಪ್ರಿಲ್ 30ರಂದು ಬೆಳಿಗ್ಗೆ 9 ಗಂಟೆಗೆ ಚುನಾವಣಾ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕಾಗಿ ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿ ಈಗಾಗಲೇ ಅದೇಶ ಹೊರಡಿಸಲಾಗಿದೆ. ಚಾಮರಾಜನಗರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ತರಬೇತಿ ನಡೆಯಲಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದಲ್ಲಿ ತರಬೇತಿ ಏರ್ಪಡಿಸಲಾಗಿದೆ.
ತರಬೇತಿ ಕಾರ್ಯಕ್ರಮದಲ್ಲಿ ಸಂಬಂಧಪಟ್ಟ ಪಿ.ಆರ್.ಒ ಮತ್ತು ಎ.ಪಿ.ಆರ್.ಒ (1ನೇ ಪೊಲಿಂಗ್ ಅಧಿಕಾರಿ)ಗಳು ಕಡ್ಡಾಯವಾಗಿ ಹಾಜರಿರÀಬೇಕು. ತಪ್ಪಿದಲ್ಲಿ ಗೈರು ಹಾಜರಾತಿಯನ್ನು ಗಂಭೀರವಾಗಿ ಪರಿಗಣಿಸಿ ಶಿಸ್ತುಕ್ರಮ ಜರುಗಿಸಲಾಗುವುದು. ತರಬೇತಿಗೆ ಇತರೆ ಪೊಲಿಂಗ್ ಅಧಿಕಾರಿಗಳು ಹಾಜರಾಗುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ. 1ರಂದು ಸಂತೆಮರಹಳ್ಳಿಯಲ್ಲಿ ಸಂತೆ ಮತ್ತು ಜಾತ್ರೆ ನಿಷೇಧ

ಚಾಮರಾಜನಗರ, ಏ. 29  ಪ್ರಧಾನಮಂತ್ರಿ ನರೇಂದ್ರಮೋದಿಯವರು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಗೆ ಮೇ. 1ರಂದು ಬಿ.ಜೆ.ಪಿ ಪಕ್ಷದ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಅಂದು ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಸಂತೇಮರಹಳ್ಳಿಯಲ್ಲಿ ನಡೆಯುವ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು