Monday, 30 April 2018

27-04-2018 ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮ:1,29,30,616, ಚಿನ್ನದ ಪದಾರ್ಥಗಳು 50 ಗ್ರಾಂ (ಐವತ್ತು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.120

27-04-2018ರಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ  ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎಂ.ಜೆ.ರೂಪಾ,ಕೆ.ಎ.ಎಸ್.(ಹಿರಿಯಶ್ರೇಣಿ)ರವರ ಅಧ್ಯಕ್ಷತೆಯಲ್ಲಿ ಹಾಗೂ  ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು,



















 ಸದರಿ ಹುಂಡಿಗಳ  ಪರ್ಕಾವಣೆಯಲ್ಲಿ  ಪ್ರಾಧಿಕಾರದ  ಉಪ ಕಾರ್ಯದರ್ಶಿಗಳಾದ ಶ್ರೀ ರಾಜಶೇಖರ್ ಮೂರ್ತಿ ರವರು,  ಎಂ. ಬಸವರಾಜು ಅಧೀಕ್ಷಕರು,   ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ,   ಶ್ರೀಬಿ.ಮದರಾಜು ಅಧೀಕ್ಷಕರು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ  ಜಿಲ್ಲಾಧಿಕಾರಿಯವರ ಕಛೇರಿಯ  ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮಂಜುನಾಥ್  ಮತ್ತು ಮಹದೇಶ್ವರಬೆಟ್ಟ  ಆರಕ್ಷಕ  ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯಯವಸ್ಥಾಪಕರಾದ ಸೆಂದಿಲ್ ನಾಥನ್  & ಸಿಬ್ಬಂದಿ ವರ್ಗದವರು ಹಾಜರಿದ್ದರು.ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು ಸದರಿ ದಿವಸದಂದು ಹುಡಿ ಪರ್ಕಾವಣೆಯಿಂದ ಒಟ್ಟು ರೂ.  1,29,30,616( ಒಂದು ಕೋಟಿ ಇಪ್ಪತ್ತೊಂಬತ್ತು ಲಕ್ಷದ ಮೂವತ್ತು ಸಾವಿರದ ಆರು ನೂರ ಹದಿನಾರು ರೂಗಳು) ಬಂದಿರುತ್ತದೆ. ಇದಲ್ಲದೇ  ಚಿನ್ನದ  ಪದಾರ್ಥಗಳು  50 ಗ್ರಾಂ (ಐವತ್ತು ಗ್ರಾಂ) ಮತ್ತು ಬೆಳ್ಳಿ  ಪದಾರ್ಥಗಳು 1.120   (ಒಂದು ಕೆ.ಜಿ. ನೂರ ಇಪ್ಪತ್ತು ಗ್ರಾಂ ) ದೊರೆತಿರುತ್ತದೆ.
x





























ಕರ್ನಾಟಕ ಸರ್ಕಾರ
ಮೇ. 1ರಂದು ಸಂತೆಮರಹಳ್ಳಿಯಲ್ಲಿ ಮಾನವ ರಹಿತ ವಾಯುವಾಹನ ನಿಷೇಧ

ಚಾಮರಾಜನಗರ, ಏ. 30 - ಪ್ರಧಾನಮಂತ್ರಿ ನರೇಂದ್ರಮೋದಿಯವರು ಚಾಮರಾಜನಗರ  ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಮೇ. 1ರಂದು ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಾಮುತ್ತಾ 15 ಕಿ.ಮೀ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಮಾನವ ರಹಿತ ವಾಯುವಾಹನ ಅಥವಾ ಮಾನವ ರಹಿತ ಏರ್‍ಕ್ರಾಫ್ಟ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ. ಕಾವೇರಿ ಅವರು ಆದೇಶ ಹೊರಡಿಸಿದ್ದಾರೆ.  

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು