Friday, 20 March 2020

ಚಾಮರಾಜನಗರ ಜಿಲ್ಲೆಯಲ್ಲಿ ಯಾವುದೆ ಕೊರೊನೊ ಪ್ರಕರಣ ಇಲ್ಲ : ಜಿಲ್ಲಾದಿಕಾರಿ ರವಿ 20-03-2020

 ಚಾಮರಾಜನಗರ ಜಿಲ್ಲೆಯಲ್ಲಿ ಯಾವುದೆ ಕೊರೊನೊ ಪ್ರಕರಣ ಇಲ್ಲ : ಜಿಲ್ಲಾದಿಕಾರಿ ರವಿ
------------------


ಮೂವರ ಪರೀಕ್ಷಾ ವರದಿ ನೆಗೆಟಿವ್  

ಚಾಮರಾಜನಗರ, ಮಾರ್ಚ್. 20 - ಜಿಲ್ಲೆಯಲ್ಲಿ ವಿದೇಶದಿಂದ ಆಗಮಿಸಿದವರ ಪೈಕಿ ಮೂವರು ವ್ಯಕ್ತಿಗಳ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಿದ್ದು, ಈ ಸಂಬಂಧ ಪ್ರಾವಿಷನಲ್ ವರದಿ ಬಂದಿದ್ದು, ಮೂವರ ಪರೀಕ್ಷಾ ವರದಿಯಲ್ಲೂ ನೆಗೆಟಿವ್ ಬಂದಿದೆ. ಯಾವುದೇ ಸೋಂಕು ಕಂಡುಬಂದಿಲ್ಲ ಎಂದು ವರದಿ ತಿಳಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯವನ್ನು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಗೆ ವಿದೇಶದಿಂದ ಆಗಮಿಸಿದವರ ಪೈಕಿ ತಪಾಸಣೆ ನಡೆಸಿ ಮೂವರು ವ್ಯಕ್ತಿಗಳ ಗಂಟಲು ದ್ರವ ಹಾಗೂ ರಕ್ತದ ಮಾದರಿಯನ್ನು ಮೈಸೂರಿನ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ವರದಿಯು ಬಂದಿದ್ದು, ನೆಗೆಟಿವ್ ಆಗಿದೆ. ಆದರೂ ಸಹ ಈ ಮೂವರನ್ನು ಆಸ್ಪತ್ರೆಯಲ್ಲಿಯೇ ಇರಿಸಿ ಅವರ ಆರೋಗ್ಯದ ಮೇಲೆ ನಿಗಾವಣೆ ಮುಂದುವರೆಸಲಾಗಿದೆ. ಇಂದೂ ಸಹ ವಿದೇಶದಿಂದ 10 ಜನರು ಬಂದಿದ್ದಾರೆ. ಎಲ್ಲರೂ ಆರೋಗ್ಯವಾಗಿದ್ದಾರೆ. ಈ ಎಲ್ಲರನ್ನು ಮನೆಯಲ್ಲಿಯೇ ಪ್ರತ್ಯೇಕಿಸಿ ನಿಗಾ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಒಟ್ಟಾರೆ ಇದುವರೆಗೆ 33 ಮಂದಿ ವಿದೇಶದಿಂದ ಬಂದವರಾಗಿದ್ದಾರೆ. 26 ಮಂದಿಯನ್ನು ಮನೆಯಲ್ಲಿಯೇ ಪ್ರತ್ಯೇಕಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಲ್ವರು 14 ದಿನಗಳ ಹೋಮ್ ಕ್ವಾರೆಂಟೈನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.






*ಮುಂದಿನ ಆದೇಶ ತನಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತ, ಗುಂಡ್ಲುಪೇಟೆ, ತೆರಕಣಾಂಬಿ ಸಂತೆ ರದ್ದು, ದಾ.ದತ್ತಿ ದೇವಾಲಯಗಳಿಗೆ ಭಕ್ತರ ಪ್ರವೇಶ ನಿಷೇದ,ಸಂಬಂದಿಸಿ ಆದೇಶ ಪತ್ರಗಳು ಇಲ್ಲಿದೆ







No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು